ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಭಸ್ಮವಾದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಂಡಿಗೇರಿ ಗ್ರಾಮಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಭೇಟಿ ನೀಡಿದ್ದರು.
ಜ್ಯೋತಿಬಾ ಸಾಮಾಯಿ ಎನ್ನುವವರ ಮನೆ ಸುಟ್ಟಿರುವ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿದ ಚನ್ನರಾಜ, ಅವರಿಗೆ ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು.
ಈ ಸಮಯದಲ್ಲಿ ಗ್ರಾಮದ ಪ್ರಮುಖರು, ತಹಶಿಲ್ದಾರ ಬಸವರಾಜ ನಾಗರಾಳ, ಹಿರೇಬಾಗೇವಾಡಿ ಸಿಪಿಐ ಮುಂತಾದವರು ಉಪಸ್ಥಿತರಿದ್ದರು.