ಬೆಳಗಾವಿ :
ನಗರದ ಚನ್ನಮ್ಮ ವೃತ್ತದಲ್ಲಿ ಇಂಗ್ಲಿಷ್ ಬ್ಯಾನರ್ ಅಳವಡಿಸಿರುವುದನ್ನು ಖಂಡಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ನಗರದಲ್ಲಿ ಕನ್ನಡ ಭಾಷೆಯ ಬ್ಯಾನರ್ ಅಳವಡಿಸುವ ಬದಲು ಇಂಗ್ಲಿಷ್ ಭಾಷೆಯಲ್ಲಿ ಬ್ಯಾನರ್ ಅಳವಡಿಸಿರುವುದನ್ನು ಖಂಡಿಸಿ ಕರವೇ ಕಾರ್ಯಕರ್ತರು ಇಂಗ್ಲಿಷ್ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವಣ್ಣವರ, ರಮೇಶ ಯರಗಣ್ಣವರ, ರುದ್ರಗೌಡ ಪಾಟೀಲ ಉಪಸ್ಥಿತರಿದ್ದರು.