ಇಂದು ಬೆಳಗಾವಿ ರುಕ್ಮಿಣಿ ನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರದ ಪವಿತ್ರ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿ, ಸ್ಥಳೀಯ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿ, ಜನವರಿ 22 ರಂದು ಮನೆಗಳಲ್ಲಿ ರಾಮಜ್ಯೋತಿ ಬೆಳಗಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಸದೆ ಶ್ರೀಮತಿ ಮಂಗಳಾ ಅಂಗಡಿ ಹಾಗೂ ನಗರ ಸೇವಕರಾದ ರಾಜಶೇಖರ್ ಡೋಣಿ, ಕೃಷ್ಣ ಭಟ್ಟರವರು ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.