ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬೆಳಿಗ್ಗೆ 10:30 ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಭೆಗೆ ಎಲ್ಲಾ ಸಚಿವರಿಗೂ ಹಾಜರಾಗಲೇಬೇಕೆಂದು ಸೂಚನೆ ನೀಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದಿನ ಸಂಪುಟ ಸಭೆಯಲ್ಲಿ ಮಧ್ಯಂತರ ವರದಿ ಬಗ್ಗೆಯೂ ಚರ್ಚೆ ಸಾಧ್ಯತೆ ಇದೆ ಮತ್ತು ಕೋವಿಡ್ ವಿಚಾರವಾಗಿಯೂ ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದುಬಂದಿದೆ.