ಗೋಕಾನಲ್ಲಿ ಪಂಚಮಸಾಲಿ ಸಮಾವೇಶ: ಶ್ರೀಗಳು

  • 15 Jan 2024 , 1:38 AM
  • Belagavi
  • 150

ಬೆಳಗಾವಿ: ನವೆಂಬರ್ 13 ರಂದು ಭಾನುವಾರ ಗೋಕಾಕ ನ್ಯೂ ಇಂಗ್ಲಿಷ್ ಶಾಲಾ ಆವರಣದಲ್ಲಿ ಲಿಂಗಾಯತ ಪಂಚಮಸಾಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಗುರುವಾರ ನಗರದ ಗಾಂಧಿ ಭವನದಲ್ಲಿ ಕರೆಯಲಾದ ಸುದ್ದಿ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಯನ್ನು ಸರಕಾರ ನೀಡಬೇಕು. ಹಲವಾರು ಬಾರಿ ಮೀಸಲಾತಿ ಕೊಡುವುದಾಗಿ ಸರಕಾರ ಭರವಸೆ ನೀಡಿ ನಮ್ಮ‌ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಡಿ.12 ರಂದು ಬೆಂಗಳೂರಿನ ವಿಧಾನ ಸೌಧಕ್ಕೆ 25 ಲಕ್ಷ ಪಂಚಮಸಾಲಿಗಳ ಮಹಾ ಮುತ್ತಿಗೆಯ ಅಂಗವಾಗಿ ಗೋಕಾಕನಲ್ಲಿ ಪಂಚಮಸಾಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಸರಕಾರ ನಾಲ್ಕು ಬಾರಿ ಮಾತು ನೀಡಿ. ಗೋಕಾಕ ಇಡೀ ರಾಜ್ಯದಲ್ಲಿ ಶಕ್ತಿ ಕೇಂದ್ರ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಂಚಮಸಾಲಿ ಸಮಾಜದವರು ಇದ್ದಾರೆ. ಜನ ಸ್ವಯಂ ಪ್ರೇರಣೆಯಿಂದ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು.

ಸಮಾವೇಶದಲ್ಲಿ ನಮ್ಮ ಸಮುದಾಯದ ಬಸನಗೌಡ ಪಾಟೀಲ ಯತ್ನಾಳ, ಈರಣ್ಣಾ ಕಡಾಡಿ, ಲಕ್ಷ್ಮೀ ಹೆಬ್ಬಾಳ್ಕರ್, ವಿಜಯಾನಂದ ಕಾಶಪ್ಪನವರ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಆಗಮಿಸಲಿದ್ದಾರೆ ಎಂದರು.

ಮಾಜಿ ಸಚಿವ ಎ.ಬಿ.ಪಾಟೀಲ, ಗುಂಡು ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Read All News