ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಗೀತಾ ನಾಮಪತ್ರ ಸಲ್ಲಿಸಿದ ಬಳಿಕ ಶಿವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದ ಜನರಿಗೆ ಅವರು ಧನ್ಯವಾದ ತಿಳಿಸಿದ ಅವರು ನಾಮಪತ್ರ ಸಲ್ಲಿಸುವಾಗ ಇಷ್ಟೊಂದು ಜನರು ಪ್ರೀತಿ-ವಿಶ್ವಾಸದಿಂದ ಬಂದಿರುವುದು ನೋಡಿದರೆ ಒಂದು ಬದಲಾವಣೆ ಬೇಕು ಅಂತ ಅವರೆಲ್ಲರೂ ಬಯಸಿದ್ದಾರೆ ಎಂಬುದು ಗೊತ್ತಾಗುತ್ತದೆ. ಅದರ ಮೂಲಕ ಬದಲಾವಣೆ ಕೇಳುತ್ತಿದ್ದಾರೆ ಎಂಬುದು ನನ್ನ ಭಾವನೆ. ನಿಮ್ಮಲ್ಲರ ಆಶೀರ್ವಾದ ಬೇಕು. ಗೀತಾ ಖಂಡಿತಾ ಗೆಲ್ಲುತ್ತಾರೆ’ ಎಂದು ಹ್ಯಾಟ್ರಿಕ್ ಹೀರೊ ಶಿವರಾಜಕುಮಾರ್ ಹೇಳಿದ್ದಾರೆ.