ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕೇದಾರನಾಥಕ್ಕೆ ಭೇಟಿ ನೀಡಿ ಶ್ರೀ ಕೇದಾರನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಿದರು. ಸಾಂಪ್ರದಾಯಿಕ ಪಹಾಡಿ ಉಡುಪನ್ನು ಧರಿಸಿದ ಪ್ರಧಾನಿ, ಒಳಗಿನ ಗರ್ಭಗುಡಿಯಲ್ಲಿ ರುದ್ರಾಭಿಷೇಕ ನೆರವೇರಿಸಿ ನಂದಿ ಪ್ರತಿಮೆಯ ಮುಂದೆ ಪ್ರಾರ್ಥಿಸಿದರು.
ಪ್ರಧಾನಮಂತ್ರಿಯವರು ಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೂ ಭೇಟಿ ನೀಡಿದರು ಮತ್ತು ಮಂದಾಕಿನಿ ಅಸ್ತಪತ್ ಮತ್ತು ಸರಸ್ವತಿ ಅಸ್ತಪತ್ ಅವರೊಂದಿಗೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.
ಪ್ರಧಾನಮಂತ್ರಿಯವರೊಂದಿಗೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಉತ್ತರಾಖಂಡದ ರಾಜ್ಯಪಾಲರಾದ ರಿ. ಜನರಲ್ ಗುರ್ಮಿತ್ ಸಿಂಗ್ ಬಾಗಿಯಾಗಿದ್ದರು.