ಇಂದೋರ್ನಲ್ಲಿ ನಡೆದ 17ನೇ PravasiBharatiyaDivas (ಪ್ರವಾಸಿ ಭಾರತೀಯ ದಿವಸ) ಸಮಾವೇಶದಲ್ಲಿ ಸುರಕ್ಷಿತ, ಕಾನೂನು, ಕ್ರಮಬದ್ಧ ಮತ್ತು ನುರಿತ ವಲಸೆಯ ಮಹತ್ವವನ್ನು ಒತ್ತಿಹೇಳಲು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ‘ಸುರಕ್ಷಿತ್ ಜಾಯೇನ್, ಪ್ರಶಿಕ್ಷಿತ್ ಜಾಯೇನ್’ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.
ಇಲ್ಲಿರುವ ಪ್ರತಿಯೊಬ್ಬ ಪ್ರವಾಸಿ ಭಾರತೀಯರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಭೂತಪೂರ್ವ ಯಶಸ್ಸನ್ನು ಸಾಧಿಸಿದ್ದಾರೆ.
ಭಾರತದ ಹೃದಯ ಎಂದೂ ಕರೆಯಲ್ಪಡುವ ಮಧ್ಯಪ್ರದೇಶದಲ್ಲಿ ಪ್ರವಾಸಿಭಾರತೀಯದಿವಸ್ ಆಯೋಜಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ ಎಂದು ಪ್ರಧಾನಿ ಹೇಳಿದರು.
Addressing the Pravasi Bharatiya Divas Convention in Indore. The Indian diaspora has distinguished itself all over the world. https://t.co/gQE1KYZIze
— Narendra Modi (@narendramodi) January 9, 2023
ಈ ಪ್ರವಾಸಿ ಭಾರತೀಯ ದಿವಸ್ ಹಲವು ವಿಧಗಳಲ್ಲಿ ವಿಶೇಷವಾಗಿದೆ.ಸ್ವಾತಂತ್ರ್ಯ ಹೋರಾಟವನ್ನು ಪ್ರದರ್ಶಿಸುವ ನಮ್ಮ ಡಿಜಿಟಲ್ ಪ್ರದರ್ಶನವನ್ನು ಇಲ್ಲಿ ಆಯೋಜಿಸಲಾಗಿದೆ ಮತ್ತು ಇದು ಮತ್ತೊಮ್ಮೆ ನಿಮ್ಮೆಲ್ಲರ ಮುಂದೆ ಅದ್ಭುತ ಯುಗವನ್ನು ತರುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.