ಬೆಳಗಾವಿ : ಜಿಲ್ಲೆಯಲ್ಲಿನ ಪ್ರತಿಯೊಂದು ವ್ಯಾಪರಸ್ಥರು ಕಡ್ಡಾಯವಾಗಿ ಕನ್ನಡದಲ್ಲಿಯೇ ನಾಮಫಲಕ ಹಾಕುವಂತೆ ಒತ್ತಾಯಿಸಿ, ಬೆಳಗಾವಿ ನಗರದಲ್ಲಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯಿತು.
ಚೆನ್ನಮ ವೃತ್ತದಿಂದ ಮಹಾನಗರ ಪಾಲಿಕೆ ವರೆಗೂ ನಡೆದ ಪ್ರತಿಭಟನಾ ಮೆರವಣಿಗೆಯುದ್ದಕ್ಕೂ
ಮಹಾನಗರ ಪಾಲಿಕೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನವೆಂಬರ್ ಒಳಗಾಗಿ ನಗರ ಸೇರಿ ಜಿಲ್ಲೆಯಾದ್ಯಂತ ಕನ್ನಡ ನಾಮಫಲಕ ಹಾಕುವಂತೆ ಒತ್ತಾಯಿಸಿ,
ಪಾಲಿಕೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕರವೇ ಕಾರ್ಯಕರ್ತರನ್ನು ಬ್ಯಾರಿಕೆಡ್ ಹಾಕಿ ಪಾಲಿಕೆಯ ಹೊರ ಭಾಗದಲ್ಲಿ ಪೊಲೀಸರು ತಡೆದರು.
ಮಹಾನಗರ ಪಾಲಿಕೆ ಮುಂಭಾಗದಲ್ಲಿ ಧರಣಿ ಕುಳಿತ ಕರವೇ ಕಾರ್ಯಕರ್ತರು.