ಬೆಳಗಾವಿ : ತಾಲೂಕಿನ ಸಂತಿ ಬಸ್ತವಾಡ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ದೇಮಣ್ಣ ನಾಯ್ಕ ಜಯ ಗಳಿಸಿದ್ದಾರೆ.
ಮಂಗಳವಾರ ಅಧ್ಯಕ್ಷ ಸ್ಥಾನಕ್ಕೆ ನಡೆದ ತುರುಸಿನ ಸ್ಪರ್ಧೆಯಲ್ಲಿ ಒಟ್ಟು 15 ಮತಗಳ ಪೈಕಿ ದೇಮಣ್ಣ ನಾಯ್ಕ 8 ಮತ ಗಳಿಸಿ ಜಯ ಸಾಧಿಸಿದರೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭರಮ ಗುದುಮ್ಕೇರಿ ಅವರು 7 ಮತ ಗಳಿಸಿ ಸೋಲನುಭವಿಸಿದರು.
ಅಧ್ಯಕ್ಷ ಸ್ಥಾನಕ್ಕೇರಿದ ಕಾಂಗ್ರೆಸ್ ಅಭ್ಯರ್ಥಿ ದೇಮಣ್ಣ ನಾಯ್ಕ ಹಾಗೂ ಆಯ್ಕೆಯಾಗಲು ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.