ಬೆಂಗಳೂರು :ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಗ್ಯಾರೆಂಟಿ ಯೋಜನೆಗಳ ಜಾರಿ ಕುರಿತಾಗಿ ಚರ್ಚಿಸಿದ್ದರು.
ಐದು ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ ಮತ್ತು ಜಾತಿ, ಧರ್ಮ, ಭಾಷೆ ಯಾವುದೆ ಭೇದ ಭಾವವಿಲ್ಲದೆ ಎಲ್ಲರಿಗೂ ಗ್ಯಾರಂಟಿ ಕೊಡ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜೂನ್ 11 ರಿಂದಲೇ ಉಚಿತ ಬಸ್ ಪ್ರಯಾಣ ಜಾರಿಯಾಗಲಿದೆ,ಜುಲೈ 1 ರಿಂದ 200 ಯೂನಿಟ್ ವರೆಗೆ ವಿದ್ಯುತ್ ಉಪಯೋಗಿಸಿದವರು ಯಾರೂ ಕರೆಂಟ್ ಬಿಲ್ ಕಟ್ಟಬೇಕಿಲ್ಲ.
ಆಗಸ್ಟ್ 15 ರಿಂದ ಗೃಹಲಕ್ಷ್ಮಿ ಯೋಜನೆ ಜಾರಿ,ಯೋಜನೆಗೆ ನೋಂದಾಯಿಸಲು 1 ತಿಂಗಳ ಕಾಲಾವಕಾಶವಿದೆ,ಆಧಾರ್, ಬ್ಯಾಂಕ್ ಪಾಸ್ಬುಕ್ ದಾಖಲೆಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು ಎಂದು ತಿಳಿದುಬಂದಿದೆ.
ಮನೆಯ ಯಜಮಾನಿಗೆ ಮಾಸಿಕ ₹2000 ಹಾಗು ಯೋಜನೆಯ ಲಾಭ ಪಡೆಯಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
#WATCH | We decided to implement all five guarantees. Guarantee-1 'Gruha Jyoti', which exempts families with up to 199 units from paying electricity bills; effective from July 1st. Guarantee-2 is 'Gruha Lakshmi'; govt will pay Rs. 2000 to woman head of family. The scheme will be… pic.twitter.com/3Ea7XOOJQJ
— ANI (@ANI) June 2, 2023