ಬೆಳಗಾವಿ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ವೀರಭದ್ರೇಶ್ವರ ರಾಷ್ಟ್ರೀಯ ಅಧ್ಯಕ್ಷರಾದ ಬಾಗೋಜಿಕೊಪ್ಪದ ಶ್ರೀ ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಅವರು ವೀರಭದ್ರೇಶ್ವರ ಜಯಂತಿ ಮಹೋತ್ಸವದ ರಾಜ್ಯಾಧ್ಯಕ್ಷರಾದ ಬಳ್ಳಾರಿ ಕಲ್ಯಾಣ ಮಠದ ಶ್ರೀ ಕಲ್ಯಾಣ ಮಹಾಸ್ವಾಮೀಜಿ ಅವರು ಶ್ರೀ ವೀರಭದ್ರೇಶ್ವರ ಜಯಂತಿ ಮಹೋತ್ಸವ ಸೆ.3 ರಂದು ಇರುವುದರಿಂದ ವೀರಭದ್ರೇಶ್ವರ ಜಯಂತಿ ಮಹೋತ್ಸವದ ಜಾಗೃತಿ ಅಭಿಯಾನವನ್ನು ಇದೇ 27 ರಂದು ಬೆಳಗಾವಿ ಜಿಲ್ಲೆಯಲ್ಲಿ ಮಾಡಲಿದ್ದಾರೆ.
ಆ.27 ರಂದು ಬೆಳಗ್ಗೆ ಬೆಳಗಾವಿ ನಗರದಲ್ಲಿರುವ ವೀರಭದ್ರೇಶ್ವರ ದೇವಸ್ಥಾನಕ್ಕೆ ಹಾಗೂ ಗೋಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ, ಯಡಿಯೂರು ವೀರಭದ್ರೇಶ್ವರ ದೇವಸ್ಥಾನಕ್ಕೆ ಡಿ.ಕೆ.ಶಿರಹಟ್ಟಿ ಹುಕ್ಕೇರಿ ತಾಲೂಕಿನಲ್ಲಿರುವ ವೀರಭದ್ರೇಶ್ವರ ದೇವಸ್ಥಾನ ಸೇರಿದಂತೆ ಅನೇಕ ದೇವಸ್ಥಾನಕ್ಕೆ ಭೇಟಿ ನೀಡಿ ಉಭಯ ಶ್ರೀಗಳು ವೀರಭದ್ರೇಶ್ವರ ಜಯಂತಿ ಉತ್ಸವ ಎಲ್ಲರೂ ಮಾಡುವಂತೆ ಮಾರ್ಗದರ್ಶನ ಮಾಡಲಿದ್ದಾರೆ.