ಬೈಲಹೊಂಗಲ:ತಾಲೂಕಿನ ಭಾವಿಹಾಳ ಗ್ರಾಮದಲ್ಲಿ ಜಮೀನು ವಿವಾದವಾಗಿ ಎರಡು ಕುಟುಂಬಗಳ ಮಧ್ಯೆ ಕಟ್ಟಿಗೆಗಳಿಂದ ಪರಸ್ಪರ ಹೊಡೆದಾಡಿಕೊಳ್ಳುವ ದೃಶ್ಯ ವೈರಲ್ ಆಗಿದೆ.
ಜಮೀನಲ್ಲಿರುವ ಸಾಗವಾನಿ ಮರ ಕಡಿದ ಹಿನ್ನೆಲೆಯಲ್ಲಿ ಗ್ರಾಮದ
ಮಹಾರುದ್ರಪ್ಪ ಕುಂಬಾರ, ಶಂಕರೆಪ್ಪ ಕುಂಬಾರ ಕುಟುಂಬಗಳ ಮಧ್ಯೆ ದೊಣ್ಣೆ ಗಳಿಂದ ಹೊಡೆದಾಡುವ ದೃಶ್ಯ ವೈರಲಾಗಿದೆ.
ಕೋರ್ಟ್ ಮೆಟ್ಟಿಲೇರಿದ್ದ ಆರೋಪಿ ಶಂಕರೆಪ್ಪ ಕುಂಬಾರ. ಜಮೀನಿನಲ್ಲಿ ಬೆಳೆದಿದ್ದ ಸಾಗುವಾನಿ ಮರಗಳನ್ನು ಕಡಿದು ಮರಗಳನ್ನು ಒಯ್ಯಲು ಬಂದಾಗ ಗಲಾಟೆ ನಡೆದಿದೆ,ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.