ಚಿಕ್ಕೋಡಿ : ಬಿಜೆಪಿಯವರು ರಾಜ್ಯಪಾಲರನ್ನು ಕೈಗೊಂಬೆಯಂತೆ ಆಡಿಸುತ್ತಿದ್ದಾರೆ.
ನಾನು ಆವಾಗೂ ಅದನ್ನೆ ಹೇಳಿದ್ದೆ, ಈವಾಗೂ ಕೂಡಾ ಇದನ್ನೆ ಹೇಳುತ್ತಾ ಇದ್ದಿನಿ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಮಾತನಾಡಿ, ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರು. ಪ್ರವಾಹದಿಂದಾಗಿ ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಬಹಳಷ್ಟು ಹಾನಿಯಾಗಿದೆ.
ಪ್ರವಾಹದ ಹೊಡೆತಕ್ಕೆ ಶಾಲೆಗಳು ಸೇರಿದಂತೆ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಕೊಳ್ಳಲಾಗಿದೆ ಎಂದರು.
ಕೇಂದ್ರ ಹಾಗೂ ರಾಜ್ಯದಿಂದ ಒಟ್ಟಾಗಿ 11 ಸಾವಿರ ರೂಗಳನ್ನು ಪರಿಹಾರವಾಗಿ ನೀಡುತ್ತಿದ್ದು, ಈ ಪರಿಹಾರ ಹಣ ರೈತರಿಗೆ ಸಾಲುತ್ತಿಲ್ಲ. ರೈತರ ಒಳಿತಿಗಾಗಿ ಹಾಗೂ ಅನುಕೂಲಕ್ಕಾಗಿ ಪರಿಹಾರದ ಧನವನ್ನು ಇನ್ನಷ್ಟು ಹೆಚ್ಚಿಸಬೇಕೆಂದು ಕೇಂದ್ರದ ಬಳಿ ಕೇಳಿಕೊಳ್ಳುತ್ತೇವೆ ಎಂದರು.
ನಟ ದರ್ಶನಗೆ ಜೈಲಿನಲ್ಲಿ ರಾಜಾತಿಥ್ಯ ವಿಚಾರವಾಗಿ, ಈಗಾಗಲೇ ಪ್ರಕರಣದ ಕುರಿತು ತನಿಖೆ ಪ್ರಾರಂಭವಾಗಿದೆ.
ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಪ್ಟ್ ಮಾಡುವುದಾಗಿಯೂ ಹೇಳಿದ್ದಾರೆ.
ಮುಂದೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡೋಣ ಎಂದರು.
ವರದಿ : ರಾಹುಲ್ ಮಾದರ