ಮಕ್ಕಳು ಮಾಡಿದ ತಪ್ಪಿಗೆ ಮೂಗ್ ಕಟ್ ಮಾಡಿದ ದುರುಳರು

  • shivaraj bandigi
  • 15 Jan 2024 , 2:52 AM
  • Belagavi
  • 699

ಬೆಳಗಾವಿ :

ಅಂಗನವಾಡಿ ಮಕ್ಕಳು ಪಕ್ಕದ ಮನೆಯಲ್ಲಿ ಹೂ ಕಿತ್ತರೂ ಎಂದು ಅಂಗನವಾಡಿ ಕಾರ್ಯಕರ್ತೆಯ ಮೂಗು ಕಿತ್ತು ಅಟ್ಟಹಾಸ ಮೆರದಿ ಘಟನೆ ನಡೆದಿದೆ.

ಅಂಗನವಾಡಿ ಸಹಾಯಕಿಗೆ ಥಳಿಸಿ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಿಬಳಿಕ ಮೂಗು ಕಟ್ ಆಗಿ ಶ್ವಾಸಕೋಶದಲ್ಲಿ ರಕ್ತ ಹೋಗಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮಕ್ಕಳು ಆಡವಾಡುತ್ತ ಮಲ್ಲಿಗೆ ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಮಾಡಿದ್ದಾರೆ.

ಮಕ್ಕಳ ಮಾಡಿದ ತಪ್ಪಿಗೆ ಸಹಾಯಕಿಗೆ ಮಹಿಳೆ ಅನ್ನೋದನ್ನೂ ಮರೆತು ಹಲ್ಲೆ ಮಾಡಿದ ಪಾಪಿಗಳು ಅದೇ ಗ್ರಾಮದ ಕಲ್ಯಾಣಿ ಮೋರೆ ಎಂಬಾತನಿಂದ ದುಷ್ಕೃತ್ಯ ಮಾಡಿದ್ದಾನೆ. ಜ.1ರಂದು ಅಂಗನವಾಡಿ ಕೇಂದ್ರದ ಮುಂದೆ ಈ ಘಟನೆ ನಡೆದಿದೆ.

ದಿನೇ ದಿನೇ ಹೆಚ್ಚುತ್ತಿರುವ ರಾಕ್ಷಸಿ ವರ್ತನೆ ಕಂಡು ಬೆಚ್ಚಿ ಬಿದ್ದ ಬೆಳಗಾವಿ ಜನರು. ಮೂಗ ಗಂಡನನೊಂದಿಗೆ ಅಂಗನವಾಡಿ ಸಹಾಯಕಿಯಾಗಿ ಜೀವನ ಕಟ್ಟಿಕೊಳ್ಳುತ್ತಿದ್ದ ಮಹಿಳೆ.

ಸದ್ಯ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೂ ಇಲ್ಲಿಯ ವರೆಗೂ ಅರೋಪಿ ಕಲ್ಯಾಣಿ ಬಂಧಿಸಿಲ್ಲ.

Read All News