ಮಂಡ್ಯ: ನಮ್ಮ ಕುಟುಂಬಕ್ಕೆ ವಿಷ ಹಾಕಿದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದ ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಅವರಿಂದ ಅವಮಾನವಾಗಿರುವ ನೂರಾರು ಮಹಿಳೆಯರ ಬಗ್ಗೆ ಯೋಚಿಸುತ್ತಿಲ್ಲ. ಇಂದೆಥಾ ನ್ಯಾಯ. ಇದನ್ನು ನೋಡಿದರೆ ಕುಮಾರಸ್ವಾಮಿ ಒಬ್ಬ ನೈತಿಕತೆ ಇಲ್ಲದ ರಾಜಕಾರಣಿ ಎಂದು ಟೀಕಾ ಪ್ರಹಾರ ನಡೆಸಿದರು.
ಈ ಹಿಂದೆ ವಿಧಾನ ಪರಿಷತ್ ನಲ್ಲಿ ಬಿಎಸ್ ಯಡಿಯೂರಪ್ಪ ಅವರೇ, ಮುಡಾದಲ್ಲಿ ದೇವೇಗೌಡ, ಕುಮಾರಸ್ವಾಮಿ ಕುಟುಂಬಕ್ಕೆ ಸೈಟ್ ಹಂಚಲಾಗಿದೆ ಎಂದು ಆರೋಪಿಸಿದ್ದರು. ಆದರೆ, ಈಗ ಕುಮಾರಸ್ವಾಮಿ, ವಿಜಯೇಂದ್ರ ಅವರೇ ಒಟ್ಟಾಗಿ ಪಾದಯಾತ್ರೆ ನಡೆಸುತ್ತಿರುವುದು ವಿಪರ್ಯಾಸ ಎಂದರು.