ನೂತನ ಐಜಿಪಿಯಾಗಿ ವಿಕಾಸ್ ಕುಮಾರ ಅಧಿಕಾರ ಸ್ವೀಕಾರ

  • Shivaraj Bandigi
  • 15 Jan 2024 , 1:57 AM
  • Belagavi
  • 509

ಬೆಳಗಾವಿ: ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕರಾಗಿ ವಿಕಾಸ್ ಕುಮಾರ್ ವಿಕಾಸ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

ಐಜಿಪಿಯಾಗಿದ್ದ ಎನ್.ಸತೀಶ್ ಕುಮಾರ್ ಅವರ ನಿರ್ಗಮನದಿಂದ ತೆರವಾದ ಸ್ಥಾನಕ್ಕೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾಗಿದ್ದ ರಮಣ ಗುಪ್ತ ಅವರನ್ನು ನೇಮಕ ಮಾಡಲಾಗಿತ್ತು. 

ಒಂದೇ ದಿನದಲ್ಲಿ ಈ ಆದೇಶವನ್ನು ಮಾರ್ಪಡಿಸಿ ಬಳ್ಳಾರಿ ವಲಯ ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. 

ಈ ಆದೇಶ ಬಂದ ಮೂರನೇ ದಿನವೇ ಮತ್ತೊಂದು ಆದೇಶ ಹೊರಡಿಸಿದ ಸರ್ಕಾರ ವಿಕಾಸ್ ಕುಮಾರ್ ವಿಕಾಸ್ ಅವರನ್ನು ಐಜಿಪಿ ಯನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಉತ್ತರ ವಲಯದ ನೂತನ ಐಜಿಪಿಯಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

Read All News