ಮನಸ್ತಾಪದ ಬಗ್ಗೆ ಡಿಸಿಎಂ ಡಿಕೆ ಹೇಳಿದ್ದೇನು

  • Shivaraj Bandigi
  • 15 Jan 2024 , 3:22 AM
  • Belagavi
  • 358

ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಮ್ಮ ನಡುವೆ ಯಾವುದೇ ಮನಸ್ತಾಪ ಇಲ್ಲ. ವಿನಾಕಾರಣ ಮಾಧ್ಯಮದಲ್ಲಿ ಸುದ್ದಿ ಬರುತ್ತಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.

ಬುಧವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ನಮ್ಮ ಪಕ್ಷದಲ್ಲಿ 136 ಜನ ಶಾಸಕರಿದ್ದಾರೆ. ಯಾರ ಬಗ್ಗೆಯೂ ನನಗೆ ಅಸಮಾಧಾನ ಇಲ್ಲ. ಅವರೆಲ್ಲರೂ ನಮ್ಮವರೆ ಎಂದ ಅವರು, ಇತ್ತೀಚೆಗೆ ಸತೀಶ ಜಾರಕಿಹೊಳಿ ಅವರು ಸಿಕ್ಕಿದ್ದರು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

Read All News