ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಯಡಿಯೂರಪ್ಪ
- 14 Jan 2024 , 11:15 PM
- Belagavi
- 113
ಬೆಳಗಾವಿ: ಚುನಾವಣೆ ಬಂದಾಗ ಯಾರ ಬಣ್ಣಾ ಏನಂತ ಗೊತ್ತಾಗುತ್ತೆ. ಈಗಲೇ ಹೇಳುವುದು ಬೇಡಾ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಭಾನುವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಪ್ರಿಯಾಂಕಾ ಖರ್ಗೆ ಹೇಳಿಕೆಗೆ ಪ್ರತಿಕ್ರಯಿಸಿದ ಅವರು, ಕಾಂಗ್ರೆಸ್ ನವರು ಹಗಲು ಕನಸು ಕಾಣುತ್ತಿದ್ದಾರೆ, ಈಗಲೇ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ 145 ರಿಂದ 150 ಕ್ಷೇತ್ರದಲ್ಲಿ ಗೆಲವು ಸಾಧಿಸಿ ಅಧಿಕಾರ ನಡೆಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.











