
ಗಡಿಯಲ್ಲಿ ರಕ್ತ ಪಾತ ;ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ
- shivaraj bandigi
- 4 Apr 2024 , 5:05 AM
- Belagavi
- 473
ಅಥಣಿ :ತಾಲೂಕಿನ ಖಿಳೆಗಾಂವ ಗ್ರಾಮದಲ್ಲಿ ಕಾಂಗ್ರೆಸ ಮುಖಂಡನ ಭೀಕರ ಹತ್ಯ ಆಗಿದ್ದು ಇಡಿ ಗ್ರಾಮವೇ ಬೆಚ್ಚಿ ಬಿದ್ದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದಲ್ಲಿ ಬುಧವಾರ ಸಾಯಂಕಾಲ 7 :00 ಗಂಟೆ ಸುಮಾರಿಗೆ ನಡುರಸ್ತೆಯಲ್ಲಿ ಆರು ಜನ ದುಸ್ಕರ್ಮಿಗಳು

ಮಾರಕಾಸ್ತ್ರಗಳಿಂದ ಹಠಾತ್ತನೆ ಹಲ್ಯಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಅಣ್ಣಪ್ಪ ಬಸಪ್ಪ ನಿಂಬಾಳ (58) ಕೊಲೆಯಾದ ವ್ಯಕ್ತಿ ಯಾಗಿದ್ದು ಮೃತ ದುರ್ದೈವಿ ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷನಾಗಿದ್ದ ಸ್ಥಳಕ್ಕೆ ಅಥಣಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ : ರಾಹುಲ್ ಮಾದರ