
ಜಲ ಸಂಪನ್ಮೂಲ ಇಲಾಖೆಯಲ್ಲಿ ಬ್ಯಾಕ್ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಕರೆ.
- 14 Jan 2024 , 8:01 PM
- Bengaluru
- 415
ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ, ಭರ್ತಿಯಾಗದ ಖಾಲಿ ಉಳಿದಿರುವ ಹುದ್ದೆಗಳು) ಜಲ ಸಂಪನ್ಮೂಲ ಇಲಾಖೆಯ ಗ್ರೂಪ್-ಸಿ ವೃಂದದ ಪರಿಶಿಷ್ಟ ಜಾತಿ ಬ್ಯಾಕ್ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ .

ಅಭ್ಯರ್ಥಿಗಳು ಜಲ ಸಂಪನ್ಮೂಲ ಇಲಾಖೆಯ ಅಂತರ್ಜಾಲದ ಮುಖಾಂತರವೇ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಇತರ ಯಾವುದೇ ಮಾದರಿಯಲ್ಲಿ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಒಟ್ಟು ಹುದ್ದೆಗಳು :155.
ಬ್ಯಾಕ್ಲಾಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ. ಈ ಹುದ್ದೆಗಳಿಗೆ ನೇಮಕಾತಿಯನ್ನು ಕರ್ನಾಟಕ ನಾಗರಿಕ ಸೇವಾ (ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಭರ್ತಿಯಾಗದ ಖಾಲಿ ಉಳಿದಿರುವ ಹುದ್ದೆಗಳು) (ವಿಶೇಷ ನೇಮಕಾತಿ) ನಿಯಮಾವಳಿಗಳು, 20010 ವಿಶೇಷ ನೇಮಕಾತಿ ನಿಯಮಗಳಂತೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಶೇಕಡವಾರು ಅಂಕಗಳು ಹಾಗೂ ವಯೋಮಿತಿ ಆಧಾರದ ಮೇಲೆ ನೇಮಕಾತಿ ಮಾಡಲಾಗುವುದು.
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ವಿಧಾನ:
18 ವರ್ಷದಿಂದ 28 ವರ್ಷ ವಯೋಮಿತಿಯುಳ್ಳ (29 ವರ್ಷದೊಳಗಿನವರು) ಅಭ್ಯರ್ಥಿಗಳ ಒಂದು ಅರ್ಹತಾ ಪಟ್ಟಿಯನ್ನು ಹಾಗೂ 29 ವರ್ಷದಿಂದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳ ಮತ್ತೊಂದು ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು, 29 ವರ್ಷದಿಂದ 40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು, ಸದರಿ ಅರ್ಹತಾ ಪಟ್ಟಿಯಲ್ಲಿ ಸೂಕ್ತ ಅರ್ಹ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಮಾತ್ರ 18 ವರ್ಷದಿಂದ 28 ವರ್ಷಗಳ ವಯೋಮಿತಿಯ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ನಂತರದ ಆದ್ಯತೆ ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ .
ಅರ್ಹತಾ ಷರತ್ತುಗಳು:
1. ಭಾರತಿಯ ನಾಗರಿಕನಾಗಿರತಕ್ಕದು.
2. ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
3. ಅಭ್ಯರ್ಥಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನೂನತೆಯಿಂದ ಮುಕ್ತರಾಗಿರಬೇಕು.
4. ದೈಹಿಕವಾಗಿ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ಅಭ್ಯರ್ಥಿತ್ವವನ್ನು ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ರಾಜ್ಯ ಸರ್ಕಾರವು ನೇಮಕಾತಿ ಪ್ರಾಧಿಕಾರವು ಕಾಯ್ದಿರಿಸಿಕೊಂಡಿದೆ ಮತ್ತು ಸರ್ಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ.
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಪದವಿ ಪೂರ್ವ ಪರೀಕ್ಷೆ. ಸಿಬಿಎಸ್ಸಿ ಮತ್ತು ಐಎಸ್ಸಿ ಮಂಡಳಿಯು ನಡೆಸುವ ಕ್ಲಾಸ್ 10+2 ಪರೀಕ್ಷೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಓ.ಎಸ್.) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್ .
ಎರಡು ವರ್ಷಗಳ ಐ.ಟಿ.ಐ. ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೊಮೊ, (ಜೆ.ಓ.ಸಿ./ಜೆ.ಓ.ಡಿ.ಸಿ./ಜೆ.ಎಲ್.ಡಿ.ಸಿ.) ಅಭ್ಯರ್ಥಿಗಳು ಎನ್.ಐ.ಒ.ಎಸ್.ನ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರ ಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿ.ಯು.ಸಿ.ಗೆ ತತ್ಸಮಾನವೆಂದು ಪರಿಗಣಿಸಲಾಗುವುದು.
ವಿದ್ಯಾರ್ಹತೆಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ತೆಗೆದುಕೊಂಡು ಉತ್ತೀರ್ಣರಾಗಿರತಕ್ಕದ್ದು. ಕನ್ನಡ ಭಾಷೆಯನ್ನು ಅಭ್ಯಸಿಸದ ಅಭ್ಯರ್ಥಿಗಳು, ಇಲಾಖೆಯು ಸೂಚಿಸುವ ಸಂಸ್ಥೆಯಿಂದ ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತಿರ್ಣರಾಗತಕ್ಕದ್ದು. ಅಂತಹ ಅಭ್ಯರ್ಥಿಗಳ ಅರ್ಜಿಗಳು ಮಾತ್ರ ಪರಿಗಣನೆಗೆ ಅರ್ಹವಾಗಿರುತ್ತವೆ.
ಹುದ್ದೆ ಮತ್ತು ವೇತನ ಶ್ರೇಣಿ:
ದ್ವಿತೀಯ ದರ್ಜೆ ಸಹಾಯಕರ ಬ್ಯಾಕ್ಲಾಗ್ ಹುದ್ದೆ (ಗ್ರೂಪ್-ಸಿ ವೃಂದ) ರೂ. 21400-500-22400-550-24600-600-27000-650-29600-750-32600-850-36000 950-39800-1100-42000 ನಿಯಮಾನುಸಾರ ಕಾಲಕಾಲಕ್ಕೆ ಅನ್ವಯವಾಗುವ ಇತರೆ + ಭತ್ಯೆಗಳು.
ಪಿಂಚಣಿ ಸೌಲಭ್ಯ:
ಸಿವಿಲ್ ಸೇವೆಯಡಿಯ ದ್ವಿತೀಯದರ್ಜೆ ಸಹಾಯಕರ ಬ್ಯಾಕ್ಲಾಗ್ ಹುದ್ದೆಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ(ಎಸ್ಪಿಎಲ್) 04 ಪಿಇಟಿ 2005 ದಿನಾಂಕ: 31-03-2006ರಂತೆ ನೂತನ ಪಿಂಚಣಿ ಯೋಜನೆಗೆ ಒಳಪಡುತ್ತಾರೆ (ಎನ್.ಪಿ.ಎಸ್).
ವಯೋಮಿತಿ:ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-10-2022 ಸಂಜೆ: 5:30 ಘಂಟೆಯೊಳಗೆ
waterresources.karnataka.gov.in