ಮುನಿರತ್ನ ವಿರುದ್ಧ ಜಾತಿ ನಿಂದನೆ, ಜೀವ ಬೆದರಿಕೆ: ಚಲುವರಾಜು CM ಗೆ ಮನವಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರಿಂದ ಜಾತಿ ನಿಂದನೆ, ಜೀವ ಬೆದರಿಕೆ ಹಾಗೂ ಕುಟುಂಬದ ವಿರುದ್ಧ ಹೀನ ಮಾತುಗಳಿಂದ ನೊಂದಿರುವ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರು ನ್ಯಾಯ ದೊರಕಿಸಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು  ಭೇಟಿಯಾಗಿ ಮನವಿ ಮಾಡಿದ್ದಾರೆ.

promotions

ಚಲುವರಾಜು ಅವರ ಹೇಳಿಕೆಯ ಪ್ರಕಾರ, ಮುನಿರತ್ನ ಅವರು ತಾವು ಗುತ್ತಿಗೆ ಕಾಮಗಾರಿ ನಡೆಸುವಾಗ ಹಗುರವಾದ ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಮಾಡಿದ್ದು, ಇದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಘಟನೆ ತಮಗೆ ತೀವ್ರವಾದ ಮಾನಸಿಕ ಆಘಾತ ಉಂಟುಮಾಡಿದ್ದು, ತಪ್ಪಿತಸ್ಥರಿಗೆ ತಕ್ಷಣದ ಕಾನೂನು ಕ್ರಮ ಜರುಗಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

promotions

Read More Articles