ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎಚ್ಚರಿಕೆ: ಕಾಮಗಾರಿ ವಿಳಂಬಕ್ಕೆ ಗುತ್ತಿಗೆದಾರರಿಗೆ ನೋಟಿಸ್‌

ಬೆಂಗಳೂರು (ಮೇ 23): ಭಾರೀ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಪರಾಮರ್ಶಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬುಧವಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು.

promotions


promotions

ರಾಜಕಾಲುವೆ ಪರಿಸ್ಥಿತಿಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರಿಂದ ಮಳೆಗಾಲದ ಪ್ರವಾಹ ತಗ್ಗಿಸಲು ₹11.5 ಕೋಟಿ ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದೆ ಎಂಬ ಮಾಹಿತಿ ಪಡೆದರು.

ಮುಖ್ಯಮಂತ್ರಿಗಳು ಕಾಮಗಾರಿ ವಿಳಂಬ ಮಾಡುತ್ತಿದ್ದ ಗುತ್ತಿಗೆದಾರರಿಗೆ ನೋಟಿಸ್‌ ನೀಡುವಂತೆ ಸೂಚಿಸಿದ್ದು, ಶಾಶ್ವತ ಪರಿಹಾರ ಇಲ್ಲದಿದ್ದರೆ ಅಮಾನತುಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

Read More Articles