ರಾಷ್ಟ್ರಪತಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಜ್ರಿವಾಲ್, ಖರ್ಗೆ ವಿರುದ್ಧ ದೂರು

ದೆಹಲಿ :ನೂತನ ಸಂಸತ್ ಭವನ ಉದ್ಘಾಟನೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ರಾಜಕೀಯ ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ.

promotions

ಕೇಜ್ರಿವಾಲ್, ಖರ್ಗೆ ಮತ್ತು ಇತರರು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಮತ್ತು ತಮ್ಮ ರಾಜಕೀಯ ಉದ್ದೇಶಗಳನ್ನು ಈಡೇರಿಸಲು ಭಾರತೀಯ ಸರ್ಕಾರದ ಮೇಲೆ  ಅಪನಂಬಿಕೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಸುದ್ದಿ ಸಂಸ್ಥೆ ANI ಪ್ರಕಟಿಸಿದ ವರದಿಯ ಪ್ರಕಾರ ದೂರನ್ನು ಸೆಕ್ಷನ್ 121,153A,505 ಮತ್ತು 34 ಐಪಿಸಿ ಅಡಿಯಲ್ಲಿ ದಾಖಲಿಸಲಾಗಿದೆ.

promotions

Read More Articles