ಚಿರನಿದ್ರೆಗೆ ಜಾರಿದ ಸಚಿವ ಉಮೇಶ ಕತ್ತಿ :ಕಂಬನಿ ಮಿಡಿದ ಗಣ್ಯಾದಿ ಗಣ್ಯರು

ಬೆಳಗಾವಿ :ಸಚಿವ ಉಮೇಶ ಕತ್ತಿಯವರ ಆಘಾತ ನಿದನಕ್ಕೆ ಗಣ್ಯಾದಿ ಗಣ್ಯರು ಸಂತಾಪ್ ಸೂಚಿಸಿದ್ದಾರೆ .

promotions

ಶ್ರೀ ಉಮೇಶ ಕತ್ತಿ ಜೀ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ ಎಂದು ಪ್ರಧಾನಿ ಮೋದಿ.

ನಿನ್ನೆ ತಡರಾತ್ರಿ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಶ್ರೀ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ತಿಳಿಸಲಾಯಿತು.
ಓಂ ಶಾಂತಿ ಎಂದು ಮುಖ್ಯ ಮಂತ್ರಿ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಶ್ರೀ ಉಮೇಶ ಕತ್ತಿಯವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು.
ಅಗಲಿದ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಪ್ರಾಮಾಣಿಕ ಸಂತಾಪ. ಓಂ ಶಾಂತಿ ಎಂದು ಪಿಯೂಷ್ ಗೋಯಲ್ ಸಂತಾಪ ಸೂಚಿಸಿದ್ದಾರೆ.

ಜನಪ್ರಿಯ ಶಾಸಕರು, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಶ್ರೀ ಉಮೇಶ್​ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನಗಲಿರುವುದು ರಾಜ್ಯಕ್ಕೆ ದೊಡ್ದ ನಷ್ಟ್
ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬಿಎಸವೈ ಸಂತಾಪ ಸೂಚಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶ್ರೀ ಉಮೇಶ ಕತ್ತಿಯವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು.
ಅಗಲಿದ ಕುಟುಂಬಕ್ಕೆ ನನ್ನ ಆಳವಾದ ಸಂತಾಪ. ಅವರ ಆತ್ಮಕೆ ಶಾಂತಿ ಸಿಗಲಿ ಎಂದು ಸಿದ್ದರಾಮಯ್ಯ ಸಂತಾಪ್ ಸೂಚಿಸಿದ್ದಾರೆ .

Read More Articles