ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಕರೆ ನೀಡಿದ ಡಿಕೆ ಶಿವಕುಮಾರ
- Krishna Shinde
- 14 Jan 2024 , 10:49 PM
- Bengaluru
- 182
ಬೆಂಗಳೂರು : ಕಾಂಗ್ರೆಸ್ ಸರಕಾರ ನೀಡಿರುವ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನ ಭಾಗ್ಯ ಯೋಜನೆಯನ್ನು ಜಾರಿಮಾಡಲು ಮುಂದಾಗಿದೆ.

ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಹೇಳುತ್ತಿರುವ ರಾಜ್ಯ ಸರಕಾರ ಬರುವ ಜೂನ್ 20ನೇ ತಾರೀಕಿಗೆ ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದೆ.

ಅನ್ನ ಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧ್ವನಿ ಎತ್ತೋಣ. ಕನ್ನಡಿಗರ ಧ್ವನಿಯನ್ನು ದಿಲ್ಲಿಗೆ ತಲುಪಿಸೋಣ,ಹಸಿವು ಮುಕ್ತ ಕರ್ನಾಟಕಕ್ಕಾಗಿ ನಡೆಯುತ್ತಿರುವ ಹೋರಾಟಕ್ಕೆ ಕೈ ಜೋಡಿಸಿ ಎಂದು ಡಿಕೆ ಶಿವಕುಮಾರ ಹೇಳಿದ್ದಾರೆ.










