ಮೀಸಲಾತಿ ಹೆಚ್ಚಳ, ಒಂದು ಹಂತ ಮಾತ್ರ ಪೂರ್ಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಗೋಕಾಕ:ನಾಗಮೋಹನ ದಾಸ್ ವರದಿಯಂತೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವು ಮೀಸಲಾತಿ ಹೆಚ್ಚಳ ಒಟ್ಟು ಕಾರ್ಯದ ಕಾಲು ಭಾಗ ಮಾತ್ರ ಪೂರ್ಣವಾದಂತಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಮಾತನಾಡಿ ಅವರು, 'ಸಂಪುಟ ಸಭೆ ನಂತರ ವಿಧಾನಸಭೆ ಚಳಿಗಾಲ ಅಧಿವೇಶನದಲ್ಲಿ ಒಪ್ಪಿಗೆ, ಲೋಕಸಭೆಯಲ್ಲಿ ಒಪ್ಪಿಗೆ ನಂತರ ಅಂತಿಮವಾಗಿ ರಾಷ್ಟ್ರಪತಿ ಅಂಕಿತ ಸಿಕ್ಕಾಗ ಮಾತ್ರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ. ಈಗಾಗಲೇ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಬಿಜೆಪಿ ಇನ್ನೂ ನಾಲ್ಕು ಬಾರಿ ಸಿಹಿ ಹಂಚಿದರಷ್ಟೇ ಕಾಯ್ದೆ ಜಾರಿಯಾಗಲಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು' ಎಂದರು.

promotions


ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ 241 ದಿನ ಧರಣಿ ನಡೆಸಿದರು. ವಾಲ್ಮೀಕಿ ಜಯಂತಿಗೆ ಬಹಿಷ್ಕಾರ ಹಾಕುವ ನಿರ್ಧಾರಕ್ಕೆ ಹೆದರಿ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಸಂಪುಟ ಸಭೆ ಕರೆದು ಮೀಸಲಾತಿ ಹೆಚ್ಚಳ ಮಾಡಿದೆ. ಇಷ್ಟಕ್ಕೆ ನಾವು ಸರ್ಕಾರವನ್ನು ಅಭಿನಂದಿಸುವುದಿಲ್ಲ. ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ಅಭಿನಂದಿಸುತ್ತೇವೆ. ಇದು ಪ್ರಸನ್ನಾನಂದ ಪುರಿ ಸ್ವಾಮೀಜಿ ಗೆಲುವಾಗಲಿದೆ ಎಂದು ಹೇಳಿದರು.

promotions

ನೆರೆಯ ತೆಲಂಗಾಣದಲ್ಲಿ ಸಹ ಇದೇ ರೀತಿ ಮೀಸಲಾತಿ ಹೆಚ್ಚಳವನ್ನು 2017ರಲ್ಲಿ ಕೈಗೊಂಡು ಕೇಂದ್ರಕ್ಕೆ ಕಳುಹಿಸಲಾಗಿತ್ತು. ಕೇಂದ್ರ ಬಿಜೆಪಿ ಸರ್ಕಾರ ಇದಕ್ಕೆ ಈವರೆಗೂ ಒಪ್ಪಿಗೆ ನೀಡಿಲ್ಲ. ನಮ್ಮಲ್ಲಿ ಇದು ಚುನಾವಣೆ ತಂತ್ರವಾಗಿದ್ದು, ಪರಿಶಿಷ್ಟ ಜಾತಿ, ಪಂಗಡದವರು ಇದನ್ನು ನಂಬಿ ಮೋಸ ಹೋಗಬಾರದು' ಎಂದು ಮನವಿ ಮಾಡಿದರು.

ಒಡೆದ ಮನಸ್ಸು ಜೋಡಿಸಲು ಭಾರತ ಜೋಡೊ ಯಾತ್ರೆ: ದೇಶ ಹಾಗೂ ರಾಜ್ಯದಲ್ಲಿರುವ ಜನರ ಮನಸ್ಸುಗಳು ಒಡೆದಿವೆ. ಸಮಾಜ ಒಡೆದಿವೆ. ಧರ್ಮ ಧರ್ಮಗಳ ಮಧ್ಯೆಯ ಗಲಭೆಗಳು ನಡೆದಿವೆ. ಇಂಥಹ ಕೆಟ್ಟ ವ್ಯವಸ್ಥೆಗೆ ಕಡಿವಾಣ ಹಾಕಲು ಹಾಗೂ ಒಡೆದಹೋದ ಮನಸ್ಸು ಜೋಡಿಸಲು ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ ಜೋಡೊ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗಾವಿ ಜಿಲ್ಲೆಯಿಂದ 13, 14, 15 ರಂದು ನಾವುಗಳು ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ಕೊನೆಗೆ ರಾಯಚೂರಿನಲ್ಲಿ ರಾಹುಲ್‌ ಗಾಂಧಿಯವನ್ನ ಬೀಳ್ಕೋಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. 

 ರಾಹುಲ್‌ ಕಣಕ್ಕಿಳಿಸಲು ಸಿದ್ದತೆ: ರಾಹುಲ್‌  ಜಾರಕಿಹೊಳಿ ಅವರನ್ನು ರಾಜಕೀಯ ಕಣಕ್ಕೆ ಇಳಿಸಲು 3 ವರ್ಷದಿಂದ ಸಾಮಾಜ ಸೇವೆ ಮಾಡಲು ತಿಳಿಸಲಾಗಿದೆ. ರಾಜಕೀಯಕ್ಕೆ ಬರಬೇಕಾದರೆ ಮೊದಲು ಸಮಾಜ ಸೇವೇಯಲ್ಲಿ ತೊಡಗಬೇಕು ಅಂದಾಗ ಮಾತ್ರ ಜನರ ಮನಸ್ಸು ಅರಿತುಕೊಳ್ಳಲು ಸಾಧ್ಯವಿದೆ ಎಂದು ನಾವು ರಾಹುಲ್‌ ಜಾರಿಕಿಹೊಳಿಗೆ ಹೇಳಿದ್ದವೇ. ಅದರಂತೆ ಅವರು ಕೂಡಾ ಸಾಕಷ್ಟು ಸಾಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅದರಂತೆ ಬೆಳಗಾವಿ, ಯಮಕನಮರಡಿ, ಗೋಕಾಕದಲ್ಲಿ ನಮ್ಮ ಕಾರ್ಯಕರ್ತರು ಇದ್ದಾರೆ. ಈ ಕ್ಷೇತ್ರದಲ್ಲಿ ಸಮಾಜ ಸೇವೆ ಮಾಡಲು ರಾಹುಲ್‌ ಜಾರಕಿಹೊಳಿಗೆ ತಿಳಿಸಲಾಗಿದೆ ಎಂದರು.

ರಾಜಕೀಯದಲ್ಲಿ ಜಾರಕಿಹೊಳಿ ಕುಟುಂಬಕ್ಕೆ ಕಡಿವಾಣ ಹಾಕಲು 30 ವರ್ಷದಿಂದ ಶತ ಪಯತ್ನ ಮಾಡಲಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಇದೇನು ಹೊಸದೇನಲ್ಲ, ಸುಮಾರು 30 ವರ್ಷದಿಂದ ರಾಜಕೀಯದಲ್ಲಿ ಜಾರಕಿಹೊಳಿ ಕುಟುಂಬಕ್ಕೆ ಕಡಿವಾಣ ಹಾಕಲು ಅಖಂಡ ಪ್ರಯತ್ನ ನಡೆಯುತ್ತಿದೆ.  ಇದು ಅವರ ಪ್ರಯತ್ನ, ಅದರಂತೆ ನಾವುಗಳು ಕೂಡಾ ಸುಮ್ಮನೆ ಕೂಡೋಕ್ಕೆ ಆಗಲ್ಲ.  ನಾವು ಕೂಡಾ ನಮ್ಮ ತಯಾರಿಯಲ್ಲಿ ಇರಬೇಕಾಗುತ್ತೆ ಎಂದು ಹೇಳಿದರು.

Read More Articles