ಬೆಂಗಳೂರು:ಸಿ.ಟಿ. ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಚಾಲನೆ ನೀಡಿರುವ ಘಟನೆ ನಡೆದಿದೆ. ಬಿಜೆಪಿ, ಡಿಕೆ ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳಕರರನ್ನು ಗುರಿಯಾಗಿಸಿ, ಅವರು ಈ ಪ್ರಕರಣಕ್ಕೆ ಹೈಪ್ ತಂದಿದ್ದಾರೆ ಎಂದು ಆರೋಪಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್,ನಾನು ಯಾವುದೇ ರೀತಿಯ ಸಂಬಂಧ ಹೊಂದಿಲ್ಲ. ಯಾವ ಸೆಕ್ಷನ್ಗೂ ನಾನು ಜವಾಬ್ದಾರನಲ್ಲ. ಕಾನೂನು ಮತ್ತು ಪೊಲೀಸರು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.
View this post on Instagram
ಬಿಜೆಪಿಯ ಆರೋಪಗಳ ಬಗ್ಗೆ ಮಾತನಾಡುತ್ತ,ಬಿಜೆಪಿ ಕರ್ನಾಟಕದಲ್ಲಿ ನಡೆಯುವ ಎಲ್ಲಾ ಘಟನೆಗಳಿಗೆ ನನ್ನನ್ನು ಟಾರ್ಗೆಟ್ ಮಾಡುತ್ತಿದೆ. ನನ್ನನ್ನು ನಿರಂತರವಾಗಿ ಆರೋಪಿಸುವುದು ಅವರ ರಾಜಕೀಯ ಆಟ
ಎಂದು ಡಿಕೆ ಶಿವಕುಮಾರ್ ಹೇಳಿದರು.
ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ತಮ್ಮ ಆರೋಪಗಳನ್ನು ಮುಂದುವರಿಸಲು ತಯಾರಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಯನ್ನು ನೋಡಲು ಎಲ್ಲರ ಕಣ್ಣುಗಳು ಕಾನೂನು ಪ್ರಕ್ರಿಯೆ ಮತ್ತು ರಾಜಕೀಯ ಬೆಳವಣಿಗೆಗಳತ್ತ ನೆಟ್ಟಿವೆ.