
ಯಕ್ಸಂಬಾ - ದಾನವಾಡ ರಸ್ತೆ ಕಾಮಗಾರಿಗೆ ಚಾಲನೆ
ವಿಧಾನ ಪರಿಷತ್ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಹುಕ್ಕೇರಿ ಅವರ ಪ್ರಯತ್ನದಿಂದ ಮಂಜೂರಾದ 2 ಕೋಟಿ ರೂಪಾಯಿ ವೆಚ್ಚದ ಯಕ್ಸಂಬಾ - ದಾನವಾಡ ರಸ್ತೆ ಕಾಮಗಾರಿಗೆ ಪ್ರಕಾಶ ಹುಕ್ಕೇರಿ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಸ್ಥಳೀಯ ಮುಖಂಡರು, ಯಕ್ಸಂಬಾ ಪಟ್ಟಣ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

