ಸಂತ, ಮಹಂತರ ಸಂದೇಶ ಅನುಷ್ಠಾನದಲ್ಲಿ ಬರಲಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ: "ಸತ್ಸಂಗಗಳಲ್ಲಿ ಭಾಗಿಯಾಗಿ ಸಂತರು, ಮಹಂತರ ಪವಿತ್ರ ನುಡಿಗಳನ್ನು ಆಲಿಸಿದ ನಂತರ ಅವುಗಳನ್ನು ಜೀವನದಲ್ಲಿ ಕಾರ್ಯರೂಪಕ್ಕೆ ತಂದಾಗ ಮಾತ್ರ ಅಂಥ ಕಾರ್ಯಕ್ರಮಗಳ ಆಯೋಜನೆ ಸಾರ್ಥಕವೆನಿಸುತ್ತದೆ" ಎಂದು  ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. 

promotions

ಅವರು ಸುಕ್ಷೇತ್ರ ಬಡಾಲ ಅಂಕಲಗಿಯಲ್ಲಿ ನಡೆದ ಶ್ರೀ ಸದ್ಗುರು ಬ್ರಹ್ಮಲೀನ ಸದಾನಂದ ಮಹಾಸ್ವಾಮಿಗಳ 18 ನೇ ಪುಣ್ಯಾರಾಧನೆ ಮತ್ತು ಸತ್ಸಂಗ ಸಮ್ಮೇಳದಲ್ಲಿ ಪಾಲ್ಗೊಂಡು, ಮಹಾಸ್ವಾಮಿಗಳ ದರ್ಶನ ಪಡೆದು ಅವರು ಮಾತನಾಡಿದರು.

promotions

"ಭಾರತೀಯ ಸಂಸ್ಕೃತಿಯ ಸತ್ಸಂಗ ಪರಂಪರೆ ಇಡೀ ಜಗತ್ತಿಗೆ ಮಾದರಿಯಾಗಿದೆ. ಸಂತರ ಸಂಗದಿಂದ ಜೀವನದ ಯಾವ ಸುಖ, ಸಂತೋಷಕ್ಕೆ ಭಂಗ ಬರುವುದಿಲ್ಲ. ಜತೆಗೆ ಮನಸ್ಸು ಶುದ್ಧವಾಗಿ ಸಮಾಜದಲ್ಲಿ ಶಾಂತಿ, ನೆಮ್ಮದಿಯ ನೆಲೆ ಕಾಣಲು ಸಾಧ್ಯವಾಗುತ್ತದೆ" ಎಂದರು. 

ಈ ಸಮಯದಲ್ಲಿ ಶ್ರೀ ಮೌನಯೋಗಿ ರಾಚಯ್ಯ ಮಹಾಸ್ವಾಮಿಗಳು, ವಿವಿಧ ಮಠಾಧೀಶರು, ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸರ್ವಸದಸ್ಯರು, ಗ್ರಾಮದ ಹಿರಿಯರು ಹಾಗೂ ಸದ್ಭಕ್ತ ಮಂಡಳಿಯವರು ಉಪಸ್ಥಿತರಿದ್ದರು.

Read More Articles