ರೇಣುಕಾಸ್ವಾಮಿ ಕೊಲೆ ಆರೋಪಿ ಪ್ರದೋಶ ಪುನಃ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
- shivaraj B
- 10 Oct 2024 , 2:16 PM
- Belagavi
- 293
ಬೆಳಗಾವಿ : ಡಿ- ಗ್ಯಾಂಗನ ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರ 14ನೇಯ ಆರೋಪಿ ಪ್ರದೋಶ್ ಬೆಳಗಾವಿಯ ಹಿಂಡಲಗಾದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಯಿತು.

ಆರೋಪಿ ಪ್ರದೂಶನನ್ನು ಪೊಲೀಸ ಬಿಗಿ ಭದ್ರತೆಯಲ್ಲಿ ಹೈಕೋರ್ಟ್ ಆದೇಶ ಹಿನ್ನೆಲೆ ಇಂದು ಹಿಂಡಲಗಾ ಜೈಲಿನಿಂದ ಬೆಂಗಳೂರಿಗೆ ಶಿಫ್ಟ್ ಮಾಡಿದರು.

ಆಗಸ್ಟ್ 28 ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಆರೋಪಿ ಕರೆತಂದಿದ್ದ ಪೊಲೀಸರು 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ ಪ್ರದೋಶನನ್ನು ರವಾನೆ ಮಾಡಲಾಯಿತು.










