ಹಂಪಯ್ಯ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಸಂತೋಷ್ ಕಲ್ ಶೆಟ್ಟಿ ಒತ್ತಾಯ

ಕವಿತಾಳ:- ಮಾನ್ವಿ ವಿಧಾನಸಭಾ ಚುನಾವಣೆಯಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಹಂಪಯ್ಯ ನಾಯಕ್ ಸಹುಕಾರ  ಅವರಿಗೆ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ  ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)
 ಕವಿತಾಳ ಹೋಬಳಿ ಘಟಕದ ಅಧ್ಯಕ್ಷರಾದ ಸಂತೋಷ್ ಕಲ್ ಶೆಟ್ಟಿ  ಒತ್ತಾಯಿಸಿದರು.

promotions

 2008 2013ರ  ವಿಧಾನಸಭಾ ಚುನಾವಣೆಗಳಲ್ಲಿ  ಸತತವಾಗಿ ಎರಡನೇ ಬಾರಿ ಗೆಲುವು ಹಾಗೂ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಮೂರನೇ ಬಾರಿ ಆಯ್ಕೆಯಾಗಿರುವ ಮೂಲಕ  ಕ್ಷೇತ್ರದಲ್ಲಿ ಹಿಡಿತ ಸಾಧಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
 ಸ್ಥಳೀಯವಾಗಿ ಹಿರಿಯ ಶಾಸಕರಾಗಿರುವ ಹಂಪಯ್ಯ ನಾಯಕ  ಅವರು ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ನೀರಾವರಿ ಸೇರಿದಂತೆ ಸದನದಲ್ಲಿ ಈ ಭಾಗದ ಜನರಿಗೆ ನ್ಯಾಯವಾದಿಸಲು ಬದ್ಧರಾಗಿದ್ದಾರೆ.
 ಈ ರಾಯಚೂರು ಭಾಗದಲ್ಲಿ  ಒಮ್ಮೆ ಕೂಡ  ಸ್ಥಳೀಯರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಅನ್ಯ ಜಿಲ್ಲೆಯವರಿಗೆ ಆದ್ಯತೆ  ನೀಡಲಾಗಿದೆ ಈ ಬಾರಿಯಾದರೂ ನಮ್ಮ ಕ್ಷೇತ್ರಕ್ಕೆ ಸ್ಥಳೀಯವಾಗಿ  ಕಾಂಗ್ರೆಸ್ ಹಿರಿಯ ಶಾಸಕರಾಗಿರುವ ಹಂಪಯ್ಯ ನಾಯಕ ಅವರಿಗೆ ಸಚಿವ ಸ್ಥಾನ ನೀಡಬೇಕು ಅವರು ಸ್ಥಳೀಯವಾಗಿ ಪ್ರಭಾವಿ ಶಾಸಕರಾಗಿದ್ದು ಈ ಭಾಗದಲ್ಲಿ ಸಚಿವ ಸ್ಥಾನ ಹಾಗೂ  ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ರಾಜ್ಯದ ಹಿರಿಯ ನಾಯಕರಿಗೆ ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದರು.

promotions

Read More Articles