
ಪಾಕಿಸ್ತಾನದಲ್ಲಿ ಸಿದ್ದರಾಮಯ್ಯನವರ ವಿಡಿಯೋ ವೈರಲ್: ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ
ಬೆಂಗಳೂರು:ಪಹಲ್ಗಾಂ ದಾಳಿಯ ಕುರಿತು ನೀಡಿದ ಹೇಳಿಕೆಯ ವಿಡಿಯೋ ಪಾಕಿಸ್ತಾನದಲ್ಲಿ ವೈರಲ್ ಆದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನಾನು ಯುದ್ಧ ಅನಿವಾರ್ಯ ಎಂದು ಹೇಳಿದ್ದೇನೆ, ಆದರೆ ತಕ್ಷಣ ಯುದ್ಧ ಆರಂಭಿಸಬಾರದು ಎಂದು ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳುವುದು ಕೇಂದ್ರ ಸರ್ಕಾರದ ಹೊಣೆಗಾರಿಕೆ. ಈ ದಾಳಿಯಲ್ಲಿ 26 ಮಂದಿ ಬಲಿಯಾದ್ದು ದುಃಖಕರ,ಎಂದು ಅವರು ಸ್ಪಷ್ಟಪಡಿಸಿದರು.

ವೈರಲ್ ವಿಡಿಯೋ ಹಿನ್ನೆಲೆಯಲ್ಲಿ ಉಂಟಾದ ಗೊಂದಲದ ನಡುವಿನಲ್ಲಿ ಸಿದ್ದರಾಮಯ್ಯನವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
