ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ :ಬೊಮ್ಮಾಯಿ
- 15 Jan 2024 , 1:20 AM
- Vijayapur
- 138
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.

ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಮುಖ್ಯ ಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.











