ಕೇಂದ್ರ ಸರಕಾರದ ರೈತ ವಿರೋಧಿ ನೀತಿಗೆ ರೈತರ ಆಕ್ರೋಶ
ಬೆಳಗಾವಿ:ಕೃಷಿ ಜಮೀನು, ಎಪಿಎಂಸಿ ಖಾಸಗೀಕರಣ ಮಾಡಲು ಹೋರಟ ಕೇಂದ್ರ ಸರಕಾರದ ವಿರುದ್ದ ನಗರದ ಚನ್ನಮ್ಮ ವೃತ್ತದಲ್ಲಿ ರೈತರು ಮಂಳವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ಕೇಂದ್ರ ಸರಕಾರ ರೈತರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ. ರೈತ ವಿರೋಧಿ ಕೃಷಿ ನೀತಿಯನ್ನು ಜಾರಿಗೊಳಿಸಿದೆ. ಇದನ್ನು ವಿರೋಧಿಸಿ ಕಳೆದ ಒಂದೂವರೆ ವರ್ಷದಿಂದ ದೆಹಲಿಯಲ್ಲಿ ಹೋರಾಟ ನಡೆಸಿದರೂ ಕ್ಯಾರೆ ಎಂದಿಲ್ಲ.