ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಬಿಜೆಪಿಯೇ ಕಾರಣ: ಶಾಸಕ ಸತೀಶ
ಬೆಳಗಾವಿ: ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹಿಜಬ್- ಕೇಸರಿ ಶಾಲು ಸಂಘರ್ಷ ನಡೆಯುತ್ತಿದ್ದು, ಈ ಸಂಘರ್ಷ ನಡೆಯದಂತೆ ರಾಜ್ಯ ಸರ್ಕಾರ ಮುಂದಾಗಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ಧಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಬ್- ಕೇಸರಿ ಶಾಲು ಸಂಘರ್ಷಕ್ಕೆ ಬಿಜೆಪಿ ಸರ್ಕಾರವೇ ಕಾರಣ. 70 ವರ್ಷದ ಕಾಂಗ್ರೆಸ್ ಅಧಿಕಾರದಲ್ಲಿ ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ತಿಳಿಸಿದರು.
ಶಿವಮೊಗ್ಗದ ಸರಕಾರಿ ಪದವಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದ್ದು, ಸರ್ಕಾರ ಎನು ಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ಹಿಜಬ್- ಕೇಸರಿ ಶಾಲು ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ.
ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುತ್ತಿರುವುದು ದುರದೃಷ್ಟಕರ ಸಂಗತಿ ಎಂದಿದ್ದಾರೆ.