ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ.

krpp

ಬಸವ ಬಳಗ ಹಾಗೂ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಗೆಳೆಯರ ಬಳಗ ಇವರ ವತಿಯಿಂದ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಇಂದು ಜರುಗಿದ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂಗಪ್ಪ ಸವದಿಜಿಯವರು ಪಾಲ್ಗೊಂಡು ಮಾತನಾಡಿದರು.ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ಆಧ್ಯಾತ್ಮಿಕ ಪ್ರವಚನದ ಮೂಲಕ ಜನಮನದಲ್ಲಿ ದೇವರಾಗಿ ಉಳಿದಿದ್ದಾರೆ ಎಂದು ಅವರನ್ನು ಸ್ಮರಿಸಿದರು.

 ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮುರುಘರಾಜೇಂದ್ರ ಸ್ವಾಮೀಜಿ, ಗದಗನ ಶ್ರೀ ಶಿವಾನಂದ ಸ್ವಾಮೀಜಿ,  ಶ್ರೀ ಶ್ರದ್ಧಾನಂದ ಸ್ವಾಮೀಜಿ, ಸಾನ್ನಿಧ್ಯ ವಹಿಸಿದ್ದರು.ಹಲವು ಗಣ್ಯ ಮಾನ್ಯರು, ಗ್ರಾಮದ ಗುರು ಹಿರಿಯರು,  ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವರದಿ ಅಜಿತ ಕಾಂಬ್ಳೆ ಲೋಕವಿವ ನ್ಯೂಸ್ ಅಥಣಿ

Latest Articles