ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ ಖಲಿಸ್ತಾನಿ ಪ್ರತಿಭಟನಾಕಾರರು : ಲಂಡನ ಸರಕಾರಕ್ಕೆ ಎಚ್ಚರಿಕೆ ಕೊಟ್ಟ ಭಾರತ ಸರ್ಕಾರ.

UK :ಖಾಲಿಸ್ತಾನ್ ಬೆಂಬಲಿಗರ ಗುಂಪು ಯುಕೆಯಲ್ಲಿರುವ ಭಾರತೀಯ ಹೈಕಮಿಷನ್‌ನ ಹೊರಗೆ ಪ್ರತ್ಯೇಕತಾವಾದಿ ನಾಯಕ ಅಮೃತಪಾಲ್ ಸಿಂಗ್ ಅವರ ಧ್ವಜಗಳು ಮತ್ತು ಪೋಸ್ಟರ್‌ಗಳೊಂದಿಗೆ ಘೋಷಣೆಗಳನ್ನು ಕೂಗಿದರು.  

ವಾರಿಸ್ ಪಂಜಾಬ್ ಡಿ (WPD) ಗುಂಪಿನ ಮೇಲೆ ಪಂಜಾಬ್‌ನಲ್ಲಿ ಭದ್ರತಾ ಪಡೆಗಳ ದಮನದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು, ಖಾಲಿಸ್ತಾನಿ ಘೋಷಣೆಗಳನ್ನು ಕೂಗಿದರು ಮತ್ತು ಹೈಕಮಿಷನ್ ಪ್ರವೇಶಿಸಲು ಪ್ರಯತ್ನಿಸಿದರು, ಒಬ್ಬ ಪ್ರತಿಭಟನಾಕಾರರು ರಸ್ತೆಯ ಮೇಲಿರುವ ಭಾರತೀಯ ಹೈಕಮಿಷನ್ ಬಾಲ್ಕನಿಗೆ ಏರಿ 
 ತ್ರಿವರ್ಣ ಧ್ವಜವನ್ನು ತೆಗೆಯಲು ಪ್ರಯತ್ನಿಸಿದ್ದಾನೆ.

ಹೈಕಮಿಷನ್ ಆವರಣಕ್ಕೆ ಪ್ರವೇಶಿಸಲು ಅನುಮತಿಸಿದ ಬ್ರಿಟಿಷ್ ಭದ್ರತೆಯ ಸಂಪೂರ್ಣ ಅನುಪಸ್ಥಿತಿಯ ವಿರುದ್ದ ಭಾರತ್ ಸರ್ಕಾರ್ ಮುನಿಸಿಕೊಂಡಿದೆ.  

ಯುಕೆಯಲ್ಲಿರುವ ಭಾರತೀಯ ರಾಜತಾಂತ್ರಿಕ ಆವರಣಗಳು ಮತ್ತು ಸಿಬ್ಬಂದಿಗಳ ಭದ್ರತೆಗೆ ಯುಕೆ ಸರ್ಕಾರದ ಉದಾಸೀನತೆಯನ್ನು ಭಾರತವು ಸ್ವೀಕಾರಾರ್ಹವಲ್ಲ ಎಂದು ಪರಿಗಣಿಸಿದೆ.

 ಈ  ಘಟನೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಗುರುತಿಸಲು, ಬಂಧಿಸಲು ಮತ್ತು ಕಾನೂನು ಕ್ರಮ ಕೈಗೊಳ್ಳಲು UK ಸರ್ಕಾರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಅಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭಾವಿಸಿದ್ದೇವೆ ಎಂದು ಭಾರತ ಸರ್ಕಾರ ಹೇಳಿದೆ.

Latest Articles